ದೀಪಾರತಿ

ದೀಪಾರತಿ.... ಕವನ ಸಂಕಲನ- ನಿತ್ಯೋತ್ಸವ.
-------------------------------------------
ನೀನುರಿಸಿದ ಹೊಂಬೆಳಕಿನ ಕಿಡಿ ಅರಳಿದೆ ಇಲ್ಲಿ,
ಕುಡಿ ಚಾಚಿದೆ ಇಲ್ಲಿ.

ನೀ ಸುರಿಸಿದ ರಸ ತೈಲದ ಗುಡಿ ಹಾರಿದೆ ಇಲ್ಲಿ;
ಗುಡಿ ಮೀರಿದೆ ಇಲ್ಲಿ.

ನೀ ಬಿತ್ತಿದ ದಯೆ ಹಬ್ಬಿದೆ ಮನು ಸಂತತಿಯಲ್ಲಿ,
ಜನ ಸಮ್ಮತಿಯಲ್ಲಿ;

ನೀನೆತ್ತಿದ ತನು ಸಾಗಿದೆ ಭಾವೋನ್ನತಿಯಲ್ಲಿ,
ನವ ಸದ್ಗತಿಯಲ್ಲಿ.

ನಿನ್ನದೆ ನೆಲೆ, ನಿನ್ನದೆ ಮನೆ; ನಿನ್ನೆದೆಯೊ ಉದಾರ;
ನಾನೂಳಿಗಕಿರುವಲ್ಪನು- ನೀ ವಾರಸುದಾರ.
ಬೆಳೆಬೆಳೆಯಲಿ ನಿನ್ನದೆ ಘನ ಮಹಿಮಾಂಕುರ ಒಳಗೆ;
ಬೆಳಬೆಳಗಲಿ ಬಿರುದಾವಳಿ, ನಾಮಾಂಕಿತ ಹಲಗೆ.

-ಕೆ ಎಸ್ ನಿಸಾರ್ ಅಹಮದ್. 

Comments

Popular posts from this blog

ಕಥಾ ಸಂವಿಧಾನ

ಹುಟ್ಟು ಮತ್ತು ಸಾವುಗಳ ನಡುವೆ...