Posts

Showing posts from June, 2020
ಅಂಬಾನಿ ಅದಾನೀಸ್ ಆಸ್ಥಾನದಲ್ಲಿ ಪ್ರಧಾನಿಯೇ ನರ್ತಕಿಯಾದರೆ?! ನೆನಪಿದೆಯಾ? ಕಳೆದ ಲೋಕಸಭಾ ಚುನಾವಣೆಗೆ ಮುನ್ನಾ ಮೋದಿಯವರ ನಾಲಿಗೆ ನುಡಿದ ಒಂದು ಮಾತು- “ನಾವು ಅಧಿಕಾರಕ್ಕೆ ಬಂದರೆ ರೈತರ ಆತ್ಮಹತ್ಯೆಯನ್ನು ಶೂನ್ಯ ಮಾಡುತ್ತೇವೆ, ಜೀರೋ ಮಾಡುತ್ತೇವೆ.” – ಈ ಮಾತನ್ನು ಬಿಜೆಪಿಯವರು ದೇಶದ ಉದ್ದಗಲಕ್ಕೂ ಜಪಿಸಿದರು. ಮೋಡಿ ಹಾಕಿದರು. ಮತದಾರರು ಮರುಳಾದರು. ಆಯ್ತು, ಬಿಜೆಪಿ ಅಧಿಕಾರಕ್ಕೂ ಬಂತು. ಮೋದಿಯವರು ಪ್ರಧಾನಿಯೂ ಆದರು. ರೈತರ ಆತ್ಮಹತ್ಯೆಯನ್ನು ಶೂನ್ಯ ಮಾಡುತ್ತೇವೆಂದ ಮೋದಿಯ ಬಿಜೆಪಿ ಸರ್ಕಾರ ಮಾಡಿದ್ದೇನು? ಭೂ ಸ್ವಾಧೀನ ಸುಗ್ರೀವಾಜ್ಞೆ ತಂದಿತು! ರೈತರನ್ನು ಭೂಮಿಯಿಂದ ಕಿತ್ತೆಸೆದು ಅವರನ್ನು ಭೂಹೀನರನ್ನಾಗಿಸಿ ರೈತರೇ ಶೂನ್ಯವಾಗುವÀ ಕಾಯಿದೆ – ಈ ಭೂಸ್ವಾಧೀನ ಸುಗ್ರೀವಾಜ್ಞೆ ಕಾಯಿದೆ! ಸ್ವಲ್ಪ ಯೋಚನೆ ಮಾಡಿ- ಭೂಮಿ ಇಟ್ಟುಕೊಂಡವನು ಆತ್ಮಹತ್ಯೆ ಮಾಡಿಕೊಂಡರೆ ತಾನೇ ಅದು ರೈತನ ಆತ್ಮಹತ್ಯೆ? ಭೂಮಿಗೆ ಅಂಟಿಕೊಂಡು ಜೀವಿಸುವ ರೈತರನ್ನು ಉಳಿಸಿ ಅವರ ಆತ್ಮಹತ್ಯೆಯನ್ನು ಶೂನ್ಯ ಮಾಡುವ ಬದಲು ಭೂಮಿಯಿಂದ ರೈತರನ್ನು ಕ್ರೂರವಾಗಿ ಕಿತ್ತೆಸೆÀದು ರೈತರನ್ನೇ ಶೂನ್ಯ ಮಾಡುವುದೇ ಈ ಬಿಜೆಪಿ ಸರ್ಕಾರದ ಭೂ ಸ್ವಾಧೀನ ಮಸೂದೆಯೆಂಬ ಈ ಜೇಡರ ಬಲೆಯ ಕಾರ್ಯಕ್ರಮ. ಭಾರತದ ಭೂಮಿಯ ಜೀವಂತಿಕೆಯನ್ನು ಅರಿತವರು, ಇಂಥ ಭೂ ಸ್ವಾಧೀನ ಕಾನೂನು ಮಾಡಲಾರರು. ಭಾರತದಲ್ಲಿ ಭೂಮಿ ಅಂದರೆ ಒಂದು ವೃಕ್ಷ ಇದ್ದಂತೆ. ಆ ವೃಕ್ಷ ಆಧರಿಸಿ ಪಶು, ಪಕ್ಷಿ, ಜಾನುವಾರುಗಳು ತಮ್ಮ ಬದುಕು
ಮೀಸಲಾತಿಯ ಹರಿಕಾರ ಶಾಹು ಮಹಾರಾಜ … ಚತ್ರಪತಿ ಶಾಹು ಮಹಾರಾಜ ಹುಟ್ಟಿದ್ದು ಜೂನ್ 26 1874 ರಂದು ಶಾಹುರವರ ಮೊದಲ ಹೆಸರು ಯಶವಂತರಾವ್ ಘಟ್ಲೆ ಅವರ ತಂದೆಯ ಹೆಸರು ಜಯಸಿಂಹರಾವ್ ಘಟ್ಲೆ ತಾಯಿ ರಾಧಾಬಾಯಿ ಇವರು ಮೂಲತಃ ಕೊಲ್ಲಾಪುರದವರು. ರಾಣಿ ಆನಂಧಿಬಾಯಿಯವರು ಮಾರ್ಚ್ 11  1884 ರಂದು ಶಾಹುರನ್ನು ದತ್ತು ತೆಗೆದುಕೊಂಡರು. ಶಾಹುರವರಿಗೆ 1894ರಂದು ಮಹಾರಾಜರಾಗಿ ಪಟ್ಟಾಭಿಷೇಕವಾಗುತ್ತದೆ. ಕ್ರಿ.ಶ 1900ರಲ್ಲಿ ಒಂದು ಘಟನೆ ನಡಿಯುತ್ತದೆ. ರಾಜನಾದವನು ಗಂಗಾ ಘಾಟ್ ಎಂಬಲ್ಲಿ ಸ್ನಾನ ಮಾಡಬೇಕಾಗಿರುತ್ತದೆ. ಆ ಸಂದರ್ಭದಲ್ಲಿ ರಾಜನಿಗೆ ಬ್ರಾಹ್ಮಣರು ಮಂತ್ರಗಳನ್ನು ಪಟಿಸಬೇಕಾಗಿರುತ್ತದೆ. ಆದರೆ ಬ್ರಾಹ್ಮಣರು ರಾಜನಿಗೆ ಪಟಿಸಬೇಕಾದ  ಮಂತ್ರಗಳನ್ನು ಹೇಳುವುದಿಲ್ಲ ಬದಲಾಗಿ ಶೂದ್ರರ ಮಂತ್ರಗಳನ್ನು ಹೆಳುತ್ತಾರೆ. ಇದನ್ನರಿತ ರಾಜರ  ಆಪ್ತರೊಬ್ಬರು ರಾಜರಿಗೆ ಈ ವಿಚಾರವನ್ನು ತಿಳಿಸುತ್ತಾರ. ಕೂಡಲೇ ಶಾಹು ಮಹಾರಾಜರು ಪುರೋಹಿತರನ್ನು ಪ್ರಶ್ನಿಸುತ್ತಾರೆ. ಅದಕ್ಕೆ ಪುರೋಹಿತರು ಹೇಳುತ್ತಾರೆ ನೀವು ಶೂದ್ರರಾಗಿರುವುದರಿಂದ ಶೂದ್ರ ಮಂತ್ರಗಳನ್ನೆ ಹೇಳಬೇಕಾಗುತ್ತದೆ. ಎಂದು ಬಹಳ ಸೂಕ್ಷ್ಮವಾಗಿ ಪ್ರತಿಕ್ರಿಯಿಸುತ್ತಾರೆ. ಆಗ ಶಾಹು ಮಹಾರಾಜರು ಒಬ್ಬ ಮಹಾರಾಜನಾಗಿರುವ ನನಗೆ ಬ್ರಾಹ್ಮಣರಿಂದ ಶೋಷಣೆಯಾಗುತಿದೆ ಇನ್ನು ಸಾಮಾನ್ಯ ಜನರಿಗೆ ಇವರಿಂದ  ಇನ್ನೆಷ್ಟು ಶೋಷಣೆಯಾಗುತ್ತಿರ ಬಹುದು ಎಂದು ಮನದಲ್ಲೇ ಮರುಕ ಪಡುತ್ತಾರೆ. ಬ್ರಾಹ್ಮಣಶಾಹಿಗಳಿಂದ    ಅಪಮಾನ, ಅವಮಾ